ಲೋಕಸಭಾ ಚುನಾವಣೆ ಬಳಿಕವೂ ಸರಕಾರ ಸೇಫೆ.!.: HKP

 

ಮೈಸೂರು: ನಾವು ಬಹಳ ಗಟ್ಟಿಯಾಗಿದ್ದು, ನಮ್ಮ ಸರ್ಕಾರ ಲೋಕಸಭಾ ಚುನಾವಣೆ ಬಳಿಕವೂ ಪತನವಾಗುವುದಿಲ್ಲವೆಂದು ಸಚಿವ ಹೆಚ್.ಕೆ.ಪಾಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿ, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಈ ವೇಳೆಯಲ್ಲಿ ವಿಪಕ್ಷ ನಾಯಕರು ಸುಖಾ ಸುಮ್ಮನೆ ಹೇಳಿಕೆ ನೀಡಿ ಸರ್ಕಾರವನ್ನು ಅಲುಗಾಡಿಸಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿದ ಅವರು, ವಕೀಲರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಿದ್ದು, ಶೀಘ್ರ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೊಳಿಸುತ್ತೇವೆ ಎಂದಿದ್ದಾರೆ.

Comments (0)
Add Comment