ವಚನ : -ಸಂಗಮೇಶ್ವರದ ಅಪ್ಪಣ್ಣ ಅವರದು.

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಹೊತ್ತಾರಿನ ಹೊತ್ತು ಮಲಮೂತ್ರ ವಿಸರ್ಜನಕ್ಕೆ ಹೋಯಿತ್ತು.

ಮಧ್ಯಾಹ್ನದ ಹೊತ್ತು ಹಸಿವು ತೃಷೆಗೆ ಹೋಯಿತ್ತು.

ಮೂರನೆಯ ಜಾವದ ಹೊತ್ತು ಹೊಟ್ಟೆತುಂಬಿದ ಬಳಿಕ,

ಕಾಯದ ಕಳವಳವ ಕೈಕೊಂಬುದಯ್ಯಾ.

ಇರುಳಾದ ಬಳಿಕ ನಿದ್ರೆಗೈದು,

ಬೆಳಗಾಹನ್ನಬರ ಸತ್ತಂತಿಹೆನು ಹೆಣನಾಗಿ ಏನುವನರಿಯದೆ.

ಅಯ್ಯಾ, ನಿಮ್ಮ ನೆನೆವವರ ಚರಣಕ್ಕೆ ಶರಣೆಂಬೆನಯ್ಯಾ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ.

 

-ಸಂಗಮೇಶ್ವರದ ಅಪ್ಪಣ್ಣ

ವಚನ : -ಸಂಗಮೇಶ್ವರದ ಅಪ್ಪಣ್ಣ ಅವರದು.
Comments (0)
Add Comment