ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ- ಇಬ್ಬರು ಶಿಕ್ಷಕರು ಅಮಾನತು

ಶಿವಮೊಗ್ಗ :  ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ ನೀಡಿದ ಆರೋಪದಡಿ ಅದೇ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ.

ಶಾಲೆಯ ಮುಖ್ಯಶಿಕ್ಷಕ ನಾಗರಾಜ್, ಸಹಶಿಕ್ಷಕ ಶಾಂತಕುಮಾರ್‌ ಅಮಾನತುಗೊಂಡ ಶಿಕ್ಷಕರು.

ಶಾಲೆಯಲ್ಲಿ ಹಲವು ದಿನದಿಂದಲೂ ಶಿಕ್ಷಕರೊಬ್ಬರು ಕೆಟ್ಟ ಮನಸ್ಥಿತಿಯಲ್ಲಿ ವಿದ್ಯಾರ್ಥಿನಿಯರನ್ನು ಸ್ಪರ್ಶಿಸುವುದು, ಅವರೊಂದಿಗೆ ಕೆಟ್ಟದಾಗಿ ನಡೆದುಕೊಳ್ಳುವುದು ಮಾಡುತ್ತಿದ್ದಾರೆಂದು, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಶಾಲೆಯ ಶಿಕ್ಷಕಿಯರ ಬಳಿ ಮಕ್ಕಳು ತಮ್ಮ ಅಳಲು ತೋಡಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ.

ಈ ಇಬ್ಬರು ಶಿಕ್ಷಕರ ಮೇಲೆ ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ ನೀಡುತ್ತಿರುವ ಬಗ್ಗೆ ಅಪಾದನೆ ಕೇಳಿಬಂದ ಹಿನ್ನೆಲೆ ಬ್ಲಾಕ್ ಶಿಕ್ಷಣಾಧಿಕಾರಿ ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ವರದಿ ಪರಿಶೀಲಿಸಿದ ಉಪನಿರ್ದೇಶಕ ಪರಮೇಶ್ವರಪ್ಪ ಅವರು ಸಂಬಂಧಪಟ್ಟ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Comments (0)
Add Comment