ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ಸಿನಿಮಾ ತಂಡ

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್​’ ಸಿನಿಮಾ ತಂಡದವರು ವಿಮಾನ ದುರಂತದಿಂದ ಪಾರಾಗಿರುವ ಬಗ್ಗೆ ಧ್ರುವ ಸರ್ಜಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಾರ್ಟಿನ್​’ ಸಿನಿಮಾದ ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡದವರ ಜೊತೆ ಧ್ರುವ ಸರ್ಜಾ ಅವರು ಶ್ರೀನಗರಕ್ಕೆ ತೆರಳಿದ್ದು, ಅಲ್ಲಿ ಶೂಟಿಂಗ್​ ಮುಗಿಸಿಕೊಂಡು ದೆಹಲಿಗೆ ವಾಪಸ್​ ಬರುವಾಗ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಇನ್ನು ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದ್ದು, ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್​​​ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ ಎಂದು ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್​’ ಚಿತ್ರತಂಡದವರು ವಿಡಿಯೋ ಮಾಡಿದ್ದಾರೆ.

Comments (0)
Add Comment