ವೀರ ಮರಣ ಹೊಂದಿದ ಅರ್ಜುನನಿಗೆ ಇಂದು ಸರ್ಕಾರಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಂಸ್ಕಾರ

ಹಾಸನ : ಮದಗಜದ ಜೊತೆ ಹೋರಾಡುವಾಗ ವೀರಮರಣನ್ನಪ್ಪಿದ ಅರ್ಜುನ ಅಂತ್ಯಕ್ರಿಯೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಸ್ಥಳಕ್ಕೆ ಮೈಸೂರು ಅರಮನೆಯ ರಾಜಮನೆತನದ ಪುರೋಹಿತ ಪ್ರಹ್ಲಾದ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಲಿದ್ದು, ಸಕಲೇಶಪುರ ತಾಲ್ಲೂಕಿನ, ಯಸಳೂರು ಹೋಬಳಿ ದಬ್ಬಳ್ಳಿಕಟ್ಟೆ ಕೆಎಫ್‌ಡಿಸಿ ನೆಡುತೋಪುನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಕಲ ವಿಧಿವಿಧಾನ ಹಾಗೂ ಸರ್ಕಾರಿ ಗೌರವಗಳೊಂದಿಗೆ ಅರ್ಜುನನ ಅಂತ್ಯಕ್ರಿಯೆ ನಡೆಯಲಿದ್ದು ಜಿಲ್ಲಾಡಳಿತ ಕೂಡ ಸರ್ಕಾರಿ ಗೌರವ ವಂದನೆ ಸಲ್ಲಿಸಲಿದೆ. ಮಧ್ಯಾಹ್ನ.12 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿರುವ ಅರಣ್ಯ ಇಲಾಖೆ ನಂತರ ಅರ್ಜುನನಿಗೆ ಅಂತಿಮನಮನ ಸಲ್ಲಿಸಿ ಸಕಲ ವಿಧಿವಿಧಾನ ಹಾಗೂ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವರಿಸಲಾಗುವುದು.

Comments (0)
Add Comment