ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್.!

 

ಧಾರವಾಡ: ಮಾಜಿ ಸಚಿವ, ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್ ಎದುರಾಗಿದೆ. ಏಳು ವರ್ಷಗಳ ಹಿಂದೆ ನಡೆದಿದ್ದ ಹುಬ್ಬಳ್ಳಿ – ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಒಂದು ಮಹತ್ವದ ಆದೇಶ ನೀಡಿದೆ.

ಈ ಕೊಲೆಯ ಪ್ರಕರಣವನ್ನು ಮರುತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಹಾಗಾಗಿ ಶಾಸಕ ಕುಲಕರ್ಣಿ ಮತ್ತೊಮ್ಮೆ ಸಚಿವನಾಗುವ ಬಯಕೆಗೆ ತಣ್ಣೀರು ಎರೆಚಿದಂತೆ ಆಗಿಬಿಟ್ಟಿದೆ.

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್.!
Comments (0)
Add Comment