ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ- ಸವಾರ ಮೃತ್ಯು

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.

ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ಕೆಆರ್ ಪುರ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ.

ನಿಂತಿದ್ದ ಶೋಭಾ ಕರಂದ್ಲಾಜೆ ಅವರ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ ಏಕಾಏಕಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಕೆಆರ್ ಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Comments (0)
Add Comment