ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಹಾಸನ: ಹಾಸನ ಲೋಕಸಭಾ ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಎ ಮಂಜು, ವಕೀಲ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಪೀಠ, ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ.

ಅಲ್ಲದೆ ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಕೋರಿದ್ದ ಪರಾಜಿತ ಅಭ್ಯರ್ಥಿ ಎ.ಮಂಜು ಅವರ ಮನವಿ ಪುರಸ್ಕರಿಸಲೂ ನ್ಯಾಯಾಲಯ ನಿರಾಕರಿಸಿದೆ.

ರೇವಣ್ಣ ಪರ ವಕೀಲರು ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ, ಸುಪ್ರೀಂಕೋರ್ಟ್’ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Comments (0)
Add Comment