ಸಚಿವ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್: ತೆಲಂಗಾಣದ ಬಿಆರ್‌ ಎಸ್ ಮುಖಂಡ ಅರೆಸ್ಟ್

ಬೆಂಗಳೂರು: ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣದ ಕರೀಂನಗರ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿ.ಈತ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ನಾಯಕತ್ವದ ಭಾರತ ರಾಷ್ಟ್ರ ಸಮಿತಿಯ ಐಟಿ ಸೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಈತನ ತಂದೆ -ತಾಯಿ ಇಬ್ಬರು ಮಾಜಿ ಕಾರ್ಪೋರೇಟರ್‌ಗಳಾಗಿದ್ದು, ಈತನೂ ಬಿಆರ್‌ ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾನೆ.

ಆರೋಪಿ ರವಿಕಾಂತ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ಪೋಸ್ಟ್ ಹಾಕಿ, ನಕಲಿ ಆಡಿಯೋ ಕ್ಲಿಪ್ ಒಂದನ್ನು ಶೇರ್ ಮಾಡಿ ಪೋಸ್ಟ್ ಮಾಡಿದ್ದ. ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

Comments (0)
Add Comment