ಸನಾತನ ಧರ್ಮದ ಬಗೆಗಿನ ನನ್ನ ಹೇಳಿಕೆ ಬದಲಾಗುವುದಿಲ್ಲ: ಉದಯನಿಧಿ ಸ್ಟಾಲಿನ್

ಚೆನ್ನೈ: ಕೊನೆವರೆಗೂ ಸನಾತನ ಧರ್ಮದ ಬಗ್ಗೆ ನಾನು ಹೊಂದಿರುವ ನಿಲುವು ಎಂದೂ ಬದಲಾಗುವುದಿಲ್ಲ. ನನ್ನ ಮಾತಿಗೆ ಈಗಲು ಬದ್ಧ. ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತೆ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಹೈಕೋರ್ಟ್‌ ಚಾಟಿ ಬೀಸಿದ ಬಳಿಕವೂ ಸಚಿವ ಉದಯನಿಧಿ ಸ್ಟಾಲಿನ್‌ ಈ ಹಿಂದೆ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಹಿಂದೆ ಸನಾತನ ಧರ್ಮವನ್ನು‘ಡೆಂಗ್ಯೂ’ ಮತ್ತು ‘ಮಲೇರಿಯಾ’ಗೆ ಹೋಲಿಸಿದ್ದ ಉದಯನಿಧಿ ಈ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು.

ನಾನು ಮಾತನಾಡಿರುವುದರಲ್ಲಿ ಯಾವ ತಪ್ಪೂ ಇಲ್ಲ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನಾವು ಈ ವಿಷಯವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ ಎಂದು ಮತ್ತೆ ತಮ್ಮ ಮಾತುಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

Comments (0)
Add Comment