ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ.!

 

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ಮಿಶ್ರಿತ ಹಾಲು ನೀಡುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22ರಂದು ಚಾಲನೆ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿನೀಡಿದ ಅವರು, ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ. ಇನ್ನುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುವುದು ಎಂದರು.

(ಸಾಂದರ್ಭಿಕ ಚಿತ್ರ)

ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ.!
Comments (0)
Add Comment