ಸವದಿ ಆಪ್ತನ ಮತ್ತು ಕಾಂಗ್ರೆಸ್‌ ಮುಖಂಡನ ಭೀಕರ ಹತ್ಯೆ

ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರನ್ನು ನಡುರಸ್ತೆಯಲ್ಲಿಯೇ ಹತ್ಯೆ ಮಾಡಲಾಗಿದೆ. ಶಾಸಕ ಲಕ್ಷ್ಮಣ ಸವದಿ ಆಪ್ತ, ಸ್ಥಳೀಯ ಕಾಂಗ್ರೆಸ್‌ ಮುಖಂಡ ಅಣ್ಣಪ್ಪ ಬಸಣ್ಣ ನಿಂಬಾಳ (58) ಕೊಲೆಯಾದ ವ್ಯಕ್ತಿ. ಅಥಣಿ ತಾಲೂಕಿನ ಖೀಳೆಗಾಂವ್‌ನಲ್ಲಿ ಅಣ್ಣಪ್ಪ ಅವರ ಮೇಲೆ ಆರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ರಾಜಕೀಯ ದ್ವೇಷವೇ ಈ ಹತ್ಯೆಗೆ ಕಾರಣ ಎನ್ನಲಾಗಿದೆ.

Comments (0)
Add Comment