ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!

 

ಬೆಂಗಳೂರು : ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಹಿಸುದ್ದಿ ನೀಡಿದ್ದು, ದ್ವಿತೀಯ ಪಿಯು ಮೂರೂ ಪರೀಕ್ಷೆಗಳನ್ನೂ ತೆಗೆದುಕೊಳ್ಳವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕಗಳನ್ನು ಪಡೆಯುತ್ತಾರೋ ಆ ಅಂಕಪಟ್ಟಿಯನ್ನೇ ಸಿಇಟಿಗೆ ಪರಿಗಣಿಸಲು ಕೆಇಎ ಸಮ್ಮತಿಸಿದೆ.

ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರತಿ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತದೆ. ಇದುವರೆಗೂ ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ, ಪೂರಕ ಪರೀಕ್ಷೆ ತೆಗೆದುಕೊಂಡು ಮತ್ತೆ ಉಳಿದ ವಿಷಯಗಳಲ್ಲಿ ತೇರ್ಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಹಾಗೂ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾ ಗಿದ್ದ ಅಂಕ ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ರಾಜ್ಯದಲ್ಲಿ ಇದೇ ಮೊದಲ ಬಾರಿ ೩ ವಾರ್ಷಿಕ ಪರೀಕ್ಷೆಗಳನ್ನು ಪರಿಚಯಿಸಲಾಗಿದ್ದು, ಯಾವುದರಲ್ಲಿ ಹೆಚ್ಚು ಅಂಕಗಳನ್ನು ಪಡೆಯುತ್ತಾರೋ ಆ ಅಂಕಪಟ್ಟಿಯನ್ನೇ ಸಿಇಟಿಗೆ ಪರಿಗಣಿಸಲು ಕೆಇಎ ಸಮ್ಮತಿಸಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಮಾಹಿತಿ ನೀಡಿದ್ದಾರೆ.

ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!
Comments (0)
Add Comment