ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಸೃಷ್ಟಿ- ಎಫ್​ಐಆರ್ ದಾಖಲು

ಬೆಂಗಳೂರು:ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್​ ಹೆಡ್​ ಸೃಷ್ಟಿಸಿದ ಪ್ರಕರಣ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದೂರು ದಾಖಲಾಗಿದೆ.

ನಕಲಿ ಲೆಟರ್ ಹೆಡರ್ ಸೃಷ್ಟಿಸಿ ಸಿಎಂ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತವೊಂದನ್ನು ಕಳುಹಿಸಲಾಗಿದೆ. ಈ ಕಡತದಲ್ಲಿ ರಾಜೇಂದ್ರ ಹೆಸರಿನಲ್ಲಿ ಸಹಿ ಹಾಕಲಾಗಿದ್ದು, ಅಂಕಿತ್ ಎಂಬಾತನಿಗೆ ಇಲಾಖೆಯಲ್ಲಿ ತಾತ್ಕಾಲಿಕ ಕೆಲಸ ನೀಡುವಂತೆ ಉಲ್ಲೇಖಿಸಲಾಗಿದೆ.

ರಾಜೇಂದ್ರ ಎಂಬ ವ್ಯಕ್ತಿ ಮುಖ್ಯಮಂತ್ರಿಗಳ ಕಚೇರಿಯಲ್ಲಿಯೇ ಇಲ್ಲ. ಈ ಹಿನ್ನೆಲೆ ಸಿಎಂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಾಜೇಂದ್ರ ಹಾಗೂ ಅಂಕಿತ್ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿದೆ

Comments (0)
Add Comment