ಸಿಧು ಮೂಸೆವಾಲ ಹತ್ಯೆ ಪ್ರಕರಣ – ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ನವದೆಹಲಿ: ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿ ವಿಕ್ರಮ್ ಬ್ರಾರ್‌ ಅನ್ನು ದುಬೈನಿಂದ ಬಂಧಿಸಲಾಗಿದೆ.

ಇನ್ನು ಆರೋಪಿ ವಿಕ್ರಮ್ ಬ್ರಾರ್ ನಟ ಸಲ್ಮಾನ್ ಖಾನ್‍ಗೆ ಸಹ ಬೆದರಿಕೆ ಒಡ್ಡಿದ್ದು, ಮೂಸೆವಾಲಾ ಹತ್ಯೆಯ ಪ್ರಮುಖ ಆರೋಪಿ ಎನ್ನಲಾಗಿದೆ.

ಪಂಜಾಬ್, ರಾಜಸ್ಥಾನ, ಹರಿಯಾಣ ಮತ್ತು ದೆಹಲಿ ಸೇರಿದಂತೆ ಹಲವು ರಾಜ್ಯಗಳ ಪೊಲೀಸರ ಮನವಿ ಮೇಲೆ ದರೋಡೆಕೋರ ವಿಕ್ರಮ್ ಬ್ರಾರ್ ವಿರುದ್ಧ 11 ಲುಕ್‍ಔಟ್ ನೋಟಿಸ್‍ಗಳನ್ನು ಹೊರಡಿಸಲಾಗಿತ್ತು.

 

Comments (0)
Add Comment