ಸುಪ್ರೀಂಕೋರ್ಟ್ ಸಿಜೆ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಹೆಸರು ಶಿಫಾರಸ್ಸು

ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೊಲಿಜಿಯಂನಲ್ಲಿ ಈ ತೀರ್ಮಾನ ಕೈಗೊಂಡು, ಅದರಂತೆ ಕೇಂದ್ರ ಸರ್ಕಾರಕ್ಕೆ ಮುಂದಿನ ಆದೇಶಕ್ಕಾಗಿ ಶಿಫಾರಸು ಮಾಡಲಾಗಿದೆ. ಕೇಂದ್ರ ಕಾನೂನು ಸಚಿವಾಲಯ ಮುಂದಿನ ಪ್ರಕ್ರಿಯೆ ನಡೆಸಿ, ನೇಮಕ ಪ್ರಸ್ತಾವವನ್ನು ರಾಷ್ಟ್ರಪತಿಗೆ ಕಳುಹಿಸಲಿದೆ. ಅವರು ನೇಮಕದ ಅಧಿಕೃತ ಆದೇಶವನ್ನು ಹೊರಡಿಸಲಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಡಿ.25ರಂದು ನಿವೃತ್ತರಾಗಿದ್ದಾರೆ. ತೆರವಾದ ಸ್ಥಾನಕ್ಕೆ ಸೇವಾ ಹಿರಿತನ ಪರಿಗಣಿಸಿ ಪ್ರಸನ್ನ ಬಿ. ವರಾಳೆ ಅವರಿಗೆ ಬಡ್ತಿ ನೀಡಲು ನಿರ್ಧರಿಸಲಾಗಿದೆ

Comments (0)
Add Comment