‘ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ’ – ನಿರ್ಮಲಾ ಸೀತರಾಮನ್‌

ನವದೆಹಲಿ: ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ನಲ್ಲಿ ಹೇಳಿದ್ದಾರೆ.

ನಿರ್ಮಲ ಸೀತರಾಮನ್‌ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡುತ್ತಿದ್ದು, “ನಾವು ಗರೀಬ್, ಮಹಿಲಾಯೆನ್, ಯುವ ಮತ್ತು ಅನ್ನದಾತನ ಬಗ್ಗೆ ಗಮನ ಹರಿಸಬೇಕಾಗಿದ್ದು, ಅವರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಅತ್ಯುನ್ನತ ಆದ್ಯತೆಗಳಾಗಿವೆ ಎಂದರು.

ಇನ್ನು ಬಡವರು, ಮಹಿಳೆಯರು, ಯುವಕರು ಮತ್ತು ರೈತರು ನಮ್ಮ ಸರ್ಕಾರಕ್ಕೆ ನಾಲ್ಕು ಜಾತಿಗಳಾಗಿವೆ. “ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ಕೌಶಲ್ಯ ಮತ್ತು ಮರು ಕೌಶಲ್ಯ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ. 7 ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಏಮ್ಸ್ ಮತ್ತು 390 ವಿಶ್ವವಿದ್ಯಾಲಯಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾಂಸ್ಥಿಕ ಉನ್ನತ ಶಿಕ್ಷಣವನ್ನು ಸ್ಥಾಪಿಸಲಾಗಿದೆ ಎಂದಿದ್ದಾರೆ.

ಜನರ ಆಶೀರ್ವಾದದಿಂದ, 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ದೇಶವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಂತ್ರದೊಂದಿಗೆ ಅಗಾಧ ಸವಾಲುಗಳನ್ನು ಎದುರಿಸುತ್ತಿತ್ತು. ಸರ್ಕಾರವು ಆ ಸವಾಲುಗಳನ್ನು ಶ್ರದ್ಧೆಯಿಂದ ನಿಭಾಯಿಸಿದೆ ಎಂದು ಹೇಳಿದ್ದಾರೆ.

Comments (0)
Add Comment