‘ಹರಿಪ್ರಸಾದ್ ವೈಯಕ್ತಿಕ ಅಸಮಧಾನ ಹೊರಹಾಕಿದ್ದು ಹೈಕಮಾಂಡ್‌ ನೋಡಿಕೊಳ್ಳುತ್ತೆ’ – ಸಚಿವ ಬೋಸರಾಜು

ರಾಯಚೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಮ್ಮ ವೈಯಕ್ತಿಕ ಅಸಮಧಾನ ಹೊರಹಾಕುತ್ತಿದ್ದು, ಅವರ ಅಸಮಾಧಾನ ಹೈಕಮಾಂಡ್ ನೋಡಿಕೊಂಡು ಸರಿಪಡಿಸುತ್ತೆ ಎಂದು ಸಚಿವ ಎನ್.ಎಸ್ ಬೋಸರಾಜು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬಿ.ಕೆ ಹರಿಪ್ರಸಾದ್ ನಮ್ಮ ಪಕ್ಷದ ಹಿರಿಯ ನಾಯಕರು. ಸಂಪುಟದಲ್ಲಿ ಸ್ಥಾನಮಾನ ಸಿಗುತ್ತೆ ಅಂತ ನಿರೀಕ್ಷೆ ಹೊಂದಿದ್ದರು. ಅವರಿಗೆ ಮಂತ್ರಿ ಸ್ಥಾನ ಸಿಗುತ್ತೆ ಅಂತ ಮಾತಿತ್ತು, ಏನಾಯ್ತೋ ಗೊತ್ತಿಲ್ಲ ಅದು ಹೈಕಮಾಂಡ್ ತೀರ್ಮಾನ ಎಂದರು.

ನಮ್ಮ ಪಕ್ಷದಲ್ಲಿ ಯಾರೇ ಸಿಎಂ ಇರಲಿ, ಯಾರೇ ಪಕ್ಷದ ಅಧ್ಯಕ್ಷರಿರಲಿ ಅಂತಿಮ ತೀರ್ಮಾನ ಹೈಕಮಾಂಡ್ ಮಾಡುತ್ತೆ. ಸಿದ್ದರಾಮಯ್ಯನವರ ಹೆಸರನ್ನ ಎಲ್ಲೂ ನೇರವಾಗಿ ಹೇಳಿಲ್ಲ, ಆದ್ರೆ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎಂದಿದ್ದಾರೆ.

Comments (0)
Add Comment