25 ಲಕ್ಷಕ್ಕೆ 2 ಕೆ ಜಿ ನಕಲಿ ಚಿನ್ನ ನೀಡಿ ವಂಚಿಸಿದ ಇಬ್ಬರು ಅರೆಸ್ಟ್..!

25 ಲಕ್ಷ ರೂ.ಗೆ 2 ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಗೆ ವಂಚಿಸಿದ್ದ ಆರೋಪಿಗಳನ್ನು ಹಾವೇರಿ ಶಿಗ್ಗಾಂವ್ ಪೊಲೀಸರು ಬಂಧಿಸಿದ್ದಾರೆ

ಕರಣ್ ಮತ್ತು ಪ್ರವೀಣ್ ಬಂಧಿತ ಆರೋಪಿಗಳಾಗಿದ್ದಾರೆ.ಆರೋಪಿಗಳು ಬೆಂಗಳೂರು ಮೂಲದ ಲಕ್ಷ್ಮಣ್ ಚೆನ್ನಬಸಯ್ಯ ಎಂಬವರಿಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿದ್ದರು.

ಮೊದಲಿಗೆ ಚಿನ್ನದ ನಾಣ್ಯ ನೀಡಿ 25 ಲಕ್ಷ ರೂ. ಪಡೆದು ಬಳಿಕ ನಕಲಿ ಚಿನ್ನದ ನಾಣ್ಯಗಳನ್ನು ನೀಡಿದ್ದರು.

ಆರೋಪಿಗಳು ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಹರಪನಹಳ್ಳಿಯ ಹೊಳಲು ಗ್ರಾಮದ ಬಳಿ ಲಕ್ಷ್ಮಣ್‍ನನ್ನು ಕರೆಸಿದ್ದರು.

ಇಲ್ಲಿಯೇ ನಾಣ್ಯಗಳನ್ನು ನೀಡಿ ಹಣ ಪಡೆದಿದ್ದು ಬಳಿಕ ಇದನ್ನು ಪರೀಕ್ಷಿಸಿದಾಗ ನಕಲಿ ಎಂಬುದು ತಿಳಿದು ಬಂದಿತ್ತು.

ಈ ಸಂಬಂಧ ಶಿಗ್ಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಬಂಧಿತ ಆರೋಪಿಗಳಿಂದ 12 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

ಸಂತೋಷ್ ಮತ್ತು ಪ್ರಕಾಶ್ ಎಂಬ ಮತ್ತಿಬ್ಬರು ಆರೋಪಿಗಳು ನಾಪತ್ತೆಯಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Comments (0)
Add Comment