“5 ವರ್ಷ ನಮ್ದೇ ಸರಕಾರ, ನಾನೇ ಸಿಎಂ”- ಎಂದ ಸಿದ್ದರಾಮಯ್ಯ

ವಿಜಯನಗರ: ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50ಕ್ಕೆ ಚಾಲನೆ ಹಾಗೂ ಇತರೆ ಕಾರ್ಯಗಳಿಗೆ ಹೊಸಪೇಟೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಬದಲಾವಣೆ ವಿಚಾರದ ಪ್ರಶ್ನೆ ಮಾಡಿದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ನಾನು ಈಗ ಮುಖ್ಯಮಂತ್ರಿ ಎಂದರು. ಐದು ವರ್ಷ ನೀವೇ ಸಿಎಂ ಆಗಿರ್ತೀರಾ ಎನ್ನುವ ಪ್ರಶ್ನೆಗೆ, ನಾನೇ ಮುಂದುವರೆಯುವೆ. ಡಿಸಿಎಂ ವಿಚಾರವಾಗಿ ತೀರ್ಮಾನ ಮಾಡೋದು ಹೈಕಮಾಂಡ್. ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಆದ್ರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿನೇ ಆಗುವುದು ಎಂದು ಪ್ರತಿಕ್ರಿಯೆ ನೀಡಿದರು. ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತೆ ಎನ್ನುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅವರು ಸೋತಿದ್ದಾರೆ. ಬೇರೆ ಕೆಲಸ ಇಲ್ಲದೇ ಬಾಯಿಗೆ ಬಂದಂಗೆ ಮಾತಾಡ್ತಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರ ಕೊಡ್ತೇವೆ. ಬಿಜೆಪಿಯವರು ಭ್ರಮ ನಿರಸನವಾಗಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರೋಕ್ ಆಗಲ್ಲ. ಈ ಹಿಂದೆ ಆಪರೇಷನ್ ಮಾಡಿ ಯಶಸ್ಸು ಕಂಡಿದ್ದಾರೆ. ಮತ್ತೆ ಆಪರೇಷನ್ ಮಾಡೋಕೆ ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದರು.

Comments (0)
Add Comment