ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು.!

 

ಬೆಂಗಳೂರು: ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್‌ ಸ್ಫೋಟಿಸಿದ ಆರೋಪದ ಮೇಲೆ ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹುಣಸಮಾನರಹಳ್ಳಿಯಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಜಿಲೆಟಿನ್‌ ಸ್ಫೋಟಿಸಲಾಗಿತ್ತು. ಈ ಸಂಬಂಧ ಸ್ಫೋಟ ತಡೆಯುವಂತೆ ಸ್ಥಳೀಯ ಜನರು ಕೂಡ ಪ್ರತಿಭಟನೆ ನಡೆಸಿದ್ದರು.

ಇದೀಗ ತಹಶೀಲ್ದಾರ್‌ ನೀಡಿರುವ ದೂರು ಆಧರಿಸಿ ಮುನಿರತ್ನ ಹಾಗೂ ಇತರೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ವರದಿಯಾಗಿದೆ.

FIR registered against former minister Munirath and four others.
Comments (0)
Add Comment