RSSನ ಗಣ ವೇಷದಲ್ಲೇ ಕಾಂಗ್ರೆಸ್ ಸೇರ್ಪಡೆಯಾದ ನಿಂಗಬಸಪ್ಪ ಬಾಣದ್.!

 

ಗದಗ: ಬಿಜೆಪಿ ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ (RSS) ಗಣ ವೇಷದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ ಎಂಬುದು ವಿಶೇಷ.!!

ಇಂದು ಗದಗ್ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್​ಎಸ್​ಎಸ್​ ಸ್ವಯಂ ಸೇವಕ ಕಾಂಗ್ರೆಸ್​ ಸೇರ್ಪಡೆಯಾದರು.

ಮೂವತ್ತು ವರ್ಷದಿಂದ ಆರ್​ಎಸ್​ಎಸ್ ಸಕ್ರೀಯ ಕಾರ್ಯಕರ್ತರಾಗಿರುವ ಬಾಣದ್ ಅವರು ಗಣವೇಷದಲ್ಲೇ ಕಾಂಗ್ರೆಸ್​​ ಶಾಲು ಹಾಕಿಸಿಕೊಂಡಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ನಿಂಗಬಸಪ್ಪ ಬಾಣದ್, ಬಿಜೆಪಿ ನರಗುಂದ ಮತ ಕ್ಷೇತ್ರದಲ್ಲಿ ಹಣ ಹಂಚಿಚುನಾವಣೆ ಮಾಡಿದೆ. ಭ್ರಷ್ಟಾಚಾರ ವಿರೋಧಿಯಾಗಿ ಬಿಜೆಪಿ ಪಕ್ಷ ತೊರೆದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ತರುತ್ತೇನೆ ಅಂತಾರೆ. ಆದ್ರೆ ಕಾಂಗ್ರೆಸ್ ನಾಯಕರ ಮೇಲೆ ಐಟಿ ‌ದಾಳಿ ಮಾಡಿಸುತ್ತಾರೆ ಎಂದು ಟೀಕಿಸಿದರು.

RSSನ ಗಣ ವೇಷದಲ್ಲೇ ಕಾಂಗ್ರೆಸ್ ಸೇರ್ಪಡೆಯಾದ ನಿಂಗಬಸಪ್ಪ ಬಾಣದ್.!
Comments (0)
Add Comment