Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಚಿತ್ರದುರ್ಗ ವಿದ್ಯಾ ಸಂಸ್ಥೆ (ರಿ), ಚಿತ್ರದುರ್ಗ ಇವರು ನಡೆಸುತ್ತಿರುವ ಶ್ರೀ ಕಾಲಭೈರವ ವಸತಿ ಫ್ರೌಢಶಾಲೆ, ಹುಲಿ ತೊಟ್ಟಿಲು, ಹಿರಿಯೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಇಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ (ಬಿಂದು-40) ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ. ಬಿ.ಇಡಿ ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಮತ್ತೊಮ್ಮೆ ಕರೆಯಲಾಗಿದೆ.

ಅರ್ಹ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಅರ್ಜಿಯನ್ನು ಜುಲೈ 13ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಖುದ್ದಾಗಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.