City Big News Desk.
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಚಾರವಾಗಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ವಾಗ್ಯುದ್ಧ ನಡೆಸಿದ ಪ್ರಸಂಗ ನಡೆದಿದೆ. ಸಚಿವರ ಮಾತಿಗೆ ಕೆಂಡಾಮಂಡಲರಾದ ಕುಮಾರಸ್ವಾಮಿ ಏಕವಚನದಲ್ಲೇ ಕಿಡಿಕಾರಿದ ಘಟನೆ ನಡೆದಿದೆ.
ಕುಮಾರಸ್ವಾಮಿಯವರೇ ಇಷ್ಟೊಂದು ಹತಾಶರಾಗಬೇಡಿ. ಪಂಚಾಯ್ತಿ ಲೆವೆಲ್ ನಲ್ಲಿ ರಾಜಕೀಯ ಮಾಡುತ್ತಿದ್ದೀರಾ ನಿಮಗೆ ನಾಚಿಕೆಯಾಗಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಸಿಟ್ಟಿಗೆದ್ದ ಕುಮಾರಸ್ವಾಮಿ, ಹತಾಶರಾಗಿರುವುದು ಯಾರು ? ನಾಚಿಕೆಯಾಗಬೇಕಿರುವುದು ನನಗಲ್ಲ ನಿಮಗೆ, ಕೂರಯ್ಯ ಸಾಕು, ನಾಚಿಕೆಯಾಗುವಂತಹ ಕೆಲಸ ನಾನು ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.