ಬೆಂಗಳೂರು: ಈದ್ ಮಿಲಾ ದಿನದಂದು ಶಿವಮೊಗ್ಗದಲ್ಲಿ ನಡೆದ ಗಲಾಟೆಯಿಂದಾಗಿ ಶಿವಮೊಗ್ಗ ನಗರದ ಜನರು ನೆಮ್ಮದಿಯಿಂದ ಬದುಕಲು ಆಗುತ್ತಿಲ್ಲ. ಇಲ್ಲಿ ಆಗಾಗ ಕೋಮು ಗಲಭೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಿದರು.
ಇನ್ನು ಬಿಜೆಪಿಯವರೇ ತಮ್ಮ ವೇಷ ಬದಲಿಸಿಕೊಂಡು ಕೋಮುಗಲಭೆಯಲ್ಲಿ ಮುಂದಾಗುತ್ತಿದ್ದಾರೆ ಎಂದು ಬಿಜೆಪಿ ದರ ವಿರುದ್ಧ ರಾಮಲಿಂಗ ರೆಡ್ಡಿ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ, ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೋಮುಗಲಭೆ ಮಾಡಿಸುವುದು ಬಿಜೆಪಿ ಹುಟ್ಟುಗುಣ. ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿ ಕೃತ್ಯವೆಸಗುತ್ತಾರೆ. ಬಿಜೆಪಿಯವರು ಅಧಿಕಾರದಲ್ಲಿ ಇಲ್ಲದಿರುವಾಗ ತಂದಿಡುವ ಕೆಲಸ ಮಾಡುತ್ತಾರೆ. ನೈತಿಕ ಪೊಲೀಸ್ ಗಿರಿ ಮಾಡಿಸುವುದು ಬಿಜೆಪಿ ಕೆಲಸ. ಬಿಜೆಪಿ ಹೆಸರು ಬದಲಿಸಿಕೊಂಡು ಕಿಡಿಗೇಡಿತನ ಮಾಡುತ್ತೆ. ಹುಟ್ಟುಗುಣ ರಕ್ತದಲ್ಲೇ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.