ಬೆಂಗಳೂರು; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಾರ್ಡ್ ಸಂಖ್ಯೆ 189 ಹೊಂಗಸಂದ್ರ ದಲ್ಲಿ “ಸ್ವಚ್ಛತಾ ಹೀ ಸೇವಾ ಶ್ರಮದಾನ” ಅಭಿಯಾನದಲ್ಲಿ ಪಾಲ್ಗೊಂಡು ಗ್ರಾಮದ ಪ್ರದೇಶದಲ್ಲಿ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಇನ್ನುಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮನಹಳ್ಳಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ ಅವರು, ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಆಂದೋಲನವನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ನಮ್ಮ ಜೊತೆ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿಗಳು ಪೌರಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೊಮ್ನಳ್ಳಿ ಮತ್ತು ಹೊಂಗಸಂದ್ರದ ಸುತ್ತಮುತ್ತಲಿನ ಇರುವಂತಹ ಕಸವನ್ನು ತೆಗೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸ್ವಚ್ಛತೆ ನಮ್ಮ ಆರೋಗ್ಯ ಆದ್ದರಿಂದ ನಾವೆಲ್ಲರೂ ನಮ್ಮ ವಾರ್ಡ್ ಮತ್ತು ಗ್ರಾಮವನ್ನು ಸ್ವಚ್ಛತವಾಗಿಟ್ಟುಕೊಳ್ಳುವುದು ನಮ್ಮ ಕರ್ತವ್ಯವೆಂದು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಭಾರತಿ ರಾಮಚಂದ್ರ ರವರು, ಬಿಜೆಪಿ ಮುಖಂಡರಾದ ರೂಪೇಶ್ ರವರು, ನಾಗಭೂಷಣ್ ರೆಡ್ಡಿ ರವರು, ಸ್ಥಳೀಯ ಮುಖಂಡರು,BBMP ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.