City Big News Desk.
ಬೆಂಗಳೂರು: ರಾಜ್ಯಾದ್ಯಂತ ಮಳೆ ಉತ್ತಮವಾಗಿ ಸುರಿಯುತ್ತಿದೆ. ಹಲವು ಕಡೆ ಪ್ರಕೃತಿ ವಿಕೋಪಗಳು ವರದಿಯಾಗಿವೆ. ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ ಅನೇಕ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಎಲ್ಲೂ ಪರಿಸ್ಥಿತಿ ವಿಕೋಪಕ್ಕೆ ಹೋಗಿಲ್ಲ. ಆದರೆ ಭಾರೀ ಮಳೆಯಿಂದಾಗಿ ಆಲಮಟ್ಟಿ, ತುಂಗಭದ್ರ, ಕಬಿನಿ, ಹಾರಂಗಿ, ಹೇಮಾವತಿ ಮೊದಲಾದ ಜಲಾಶಯಗಳೆಲ್ಲ ಭರ್ತಿಯಾಗಿರುವುದು ಸಂತಸದ ಸಂಗತಿ ಎಂದು ಸಿದ್ದರಾಮಯ್ಯ ಹೇಳಿದರು. ಅತಿಹೆಚ್ಚು ಮಳೆಯಾಗುತ್ತಿರುವ ಉಡುಪಿ, ದಕ್ಷಿಣ ಕನ್ನಡ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಸೋಮವಾರ ಪ್ರವಾಸ ತೆರಳಿ ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸುವುದಾಗಿ ಸಿದ್ದರಾಮಯ್ಯ ಹೇಳಿದರು.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.