ಬೆಂಗಳೂರು: 2024ನೇ ಲೋಕಸಭಾ ಚುನಾವಣೆಗೆ ರಾಜ್ಯ ಮತ್ತು ಕೇಂದ್ರಗಳಲ್ಲಿ ಭರ್ಜರಿಯಾಗಿ ತಯಾರಿ ನಡೆಯುತ್ತಿತ್ತು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ರಿಂದ 22 ಕ್ಷೇತ್ರಗಳನ್ನು ಗೆಲ್ಲುವ ಭರವಸೆಯನ್ನು ಹೊಂದಿದೆ. ಇನ್ನು ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಯಾರು ಮಾಡಿಕೊಂಡಿದ್ದಾರೆ. ಮರುನಾಮಕರಣಕ್ಕೂ ಮತ್ತು ಲೋಕಸಭಾ ಚುನಾವಣೆಗೂ ನಂಟಿದೆ ಎಂದು ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ. ಹೌದು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸುವುದರ ಹಿಂದೆ ಲೋಕಸಭಾ ಚುನಾವಣೆಯ ಲೆಕ್ಕಾಚಾರಗಳಿವೆ