City Big News Desk.
ಕೆಲ ತಿಂಗಳುಗಳ ಹಿಂದೆ ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಸುನಿಲ್ ಶೆಟ್ಟಿ ಅವರ ಪುತ್ರಿ ಅತಿಯಾ ಶೆಟ್ಟಿ ಅವರ ಜೊತೆ ವಿವಾಹವಾಗಿರುವ ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಭಾನುವಾರದಂದು ನಾಗಾರಾಧನೆಯ ಪುಣ್ಯಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ.
ತಮ್ಮ ಸ್ನೇಹಿತರೊಂದಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಕೆ.ಎಲ್. ರಾಹುಲ್, ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಸೇವೆ ನೆರವೇರಿಸಿದ್ದಾರೆ. ಬಳಿಕ ಹೊಸಳ್ಳಿಗಮ್ಮನ ದರ್ಶನ ಪಡೆದ ಅವರು ಪ್ರಸಾದ ಭೋಜನ ಸ್ವೀಕರಿಸಿದ್ದಾರೆ.
ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ರಾಹುಲ್ ಅವರಿಗೆ ದೇಗುಲದ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದ್ದು, ಬಳಿಕ ದೇವಾಲಯದ ಆಡಳಿತ ಮಂಡಳಿ ಕಚೇರಿಗೂ ರಾಹುಲ್ ಭೇಟಿ ನೀಡಿದ್ದಾರೆ. ಕೆ.ಎಲ್. ರಾಹುಲ್ ಪ್ರತಿ ವರ್ಷವೂ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಸುಬ್ರಹ್ಮಣ್ಯ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.