ಬೆಂಗಳೂರು: ರಾಜ್ಯದಲ್ಲಿ ಕಳೆದ ತಿಂಗಳಿಂದ ದಾಖಲೆ ಮಟ್ಟದ ಬೆಲೆ ಏರಿಕೆ ಕಂಡಿದ್ದ ಟೊಮೊಟೊ ಬೆಲೆ ಈಗ ಕೊಂಚ ಇಳಿಕೆಯಾದಂತಿದ್ದು ಮತ್ತೆ ರಾಜ್ಯದ ಜನರಿಗೆ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೆ ಸಿಲುಕುವುದು ಪಕ್ಕಾ ಆಗಿದೆ.
ಹೌದು, ದಾಖಲೆ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದ್ದ ಟೊಮೆಟೊ ದರ ಸದ್ಯ ಇಳಿಕೆ ಕಂಡಿದೆ. ಮಳೆ ಕಡಿಮೆಯಾದ ಹಿನ್ನೆಲೆ ಒಂದು ವಾರದಿಂದ ಟೊಮೆಟೊ ದರ ಕುಸಿತ ಕಾಣುತ್ತಿದೆ. ಇದರಿಂದ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ.
ಆದರೆ ಇದೀಗ ಮತ್ತೆ ಟೊಮೆಟೊ ಬಳಿಕ ಬೆಳ್ಳುಳ್ಳಿ ಹಾಗೂ ಈರುಳ್ಳಿ ಜನರಲ್ಲಿ ಕಣ್ಣೀರು ತರಿಸಲು ಆರಂಭಿಸಿದೆ. ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ.
ಸೈಲೆಂಟ್ ಆಗಿ ಏರಿಕೆ ಕಾಣುತ್ತಿರುವ ಈರುಳ್ಳಿ
ಟೊಮೆಟೊ ಬೆಲೆ ಇಳಿಕೆಯ ನಡುವೆ ಸೈಲೆಂಟ್ ಆಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರ ಕೆಜಿಗೆ 25 ರೂ. ಇದ್ದ ಈರುಳ್ಳಿ ಬೆಲೆ, ಈ ವಾರ 30 -40 ರೂ.ಗೆ ತಲುಪಿದೆ. ಸೂಪರ್ ಮಾರ್ಕೆಟ್ಗಳಲ್ಲಿ ಕೆಜಿಗೆ 45 ರೂ.ಗಳಂತೆ ಮಾರಾಟ ಮಾಡಲಾಗುತ್ತಿದೆ.
ಮುಂಗಾರು ಮಳೆ ಕೈಕೊಟ್ಟು ಚಿತ್ರದುರ್ಗ, ದಾವಣಗೆರೆ ಹಾಗೂ ಕರ್ನಾಟಕದ ಇತರೆಡೆಯಿಂದ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್ನಲ್ಲಿ ಬೆಳೆ ಕೊರತೆ ಇದೆ. ಮುಂಗಾರು ಮಳೆ ವಿಳಂಬವಾಗಿರುವುದರಿಂದ ಸುಮಾರು 6-8 ವಾರಗಳ ಕೊಯ್ಲು ವಿಳಂಬವಾಗಿದೆ.
ಇನ್ನು ಮತ್ತೊಂದೆಡೆ ಬೆಳ್ಳುಳ್ಳಿ ದರ ಕೂಡ ಏರಿಕೆ ಕಾಣುತ್ತಿದೆ. ಕೆಜಿ ಬೆಳ್ಳುಳ್ಳಿಗೆ 200 ರೂಪಾಯಿ ಇದೆ. ಹೊಸ ಕ್ರಾಫ್ಟ್ ಬರುವವರಿಗೂ ಇದೆ ಬೆಲೆ ಮುಂದುವರಿಯುವ ಸಾಧ್ಯತೆ ಇದೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.