City Big News Desk.
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದ್ದು, ಇದರ ಹೊರತಾಗಿ ರಾಜ್ಯ ಸರ್ಕಾರದ ಕಡೆಯಿಂದ 5 ಕೆಜಿ ಅಕ್ಕಿ ಬದಲಿಗೆ ಖಾತೆಗೆ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ.
ಜುಲೈ 10ರಂದು ಸೋಮವಾರ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಕಾರಣಾಂತರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಅಕ್ಕಿಯ ಹಣವನ್ನು ಕಾರ್ಡ್ ಯಜಮಾನರ ಖಾತೆಗೆ ಜಮಾ ಮಾಡಲಾಗುತ್ತದೆ. ಜುಲೈ 10ರಂದು ಫಲಾನುಭವಿಗಳ ಸಮಾವೇಶ, ಸಂವಾದ ಏರ್ಪಡಿಸಿ ಏಕಕಾಲಕ್ಕೆ ಖಾತೆಗೆ ಅಕ್ಕಿ ಹಣ ಜಮಾ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.