ಬೆಂಗಳೂರು: ಕರ್ನಾಟಕ ರಾಜ್ಯದ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ ಬಿವೈ ವಿಜಯೇಂದ್ರ ಅವರು ಬಿಜೆಪಿ ಹಿರಿಯ ನಾಯಕರಿಗೆ ಧನ್ಯವಾದ ಹೇಳಿದರು.
ಇನ್ನು ಅಧಿಕಾರ ಸ್ವೀಕಾರ ಮಾಡಿದ ನಂತರ ಮಾತನಾಡಿದವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ ಆರು ತಿಂಗಳು ತುಂಬಿದರು ಸಹ ಬರಿ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ. ಆದರೆ ಇಲ್ಲಿಯವರೆಗೆ ರಾಜ್ಯದಲ್ಲಿ ಯಾವುದೇ ಉಪಯುಕ್ತ ಕಾರ್ಯವನ್ನು ಕೈಗೊಂಡಿಲ್ಲವೆಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನೂತನ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಗುಡುಗಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವು 28ಕ್ಕೂ 28 ಕ್ಷೇತ್ರ ಗೆಲ್ಲುವ ಮೂಲಕ ಬರೀ ರಾಜ್ಯದ ಭವಿಷ್ಯವಲ್ಲದೆ ಇಡೀ ದೇಶದ ಭವಿಷ್ಯವನ್ನು ನಾವು ನಿರೂಪಿಸಬೇಕೆಂದು ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಪಕ್ಷದ ನಾಯಕರು ಮತ್ತು ಮುಖಂಡ ಮುಖಂಡರುಗಳಿಗೆ ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಗರ್ವದಿಂದ ಮೆರೆಯುತ್ತಿದೆ. ಸಚಿವರು, ಶಾಸಕರುಗಳನ್ನು ನಾವು ಕಿತ್ತೆಸೆಯಬೇಕು. ರಾಜ್ಯದಲ್ಲಿ ಈಗಾಗಲೇ ಬರಗಾಲ ಕಾಡುತ್ತಿದೆ ಆದರೆ ಇದರ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಹೇಳಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.