Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಚನ -ಘಟ್ಟಿವಾಳಯ್ಯ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.ಸ

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: : ಕರವೂರ ನಿರಹಂಕಾರ-ಸುಜ್ಞಾನಿದೇವಿಯರ

ಬಸುರಲ್ಲಿ ಬಂದರೆನ್ನಬಹುದೆ ಪ್ರಭುದೇವರ?

ಮಂಡಗೆಯ ಮಾದಿರಾಜ- ಮಾದಲಾಂಬಿಕೆಯಮ್ಮನವರ

ಬಸುರಲ್ಲಿ ಬಂದರೆನ್ನಬಹುದೆ ಬಸವೇಶ್ವರನ?

ಅಕ್ಕನಾಗಲಾಂಬಿಕೆಯಮ್ಮನ ಬಸುರಲ್ಲಿ

ಬಂದರೆನ್ನಬಹುದೆ ಚೆನ್ನಬಸವೇಶ್ವರನ?

ಮೊರಡಿಯ ಮುದ್ದುಗೌಡ-ಸುಗ್ಗವ್ವೆಯ [ರ]

ಬಸುರಲ್ಲಿ ಬಂದೆರೆನ್ನಬಹುದೆ ಸಿದ್ಧರಾಮೇಶ್ವರನ?

ಇವರು ಒಬ್ಬರಿಂದಾದವರಲ್ಲ, ತಮ್ಮಿಂದ ತಾವಾದರು.ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ [ನಿಲ್ಲು] ಮಾಣು.

 

-ಘಟ್ಟಿವಾಳಯ್ಯ