Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಜಂಗಮಲಿಂಗಪ್ರಭುವೆ  ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: : ಹರಹರಯೆಂದು ನೆನೆದಡೆ ಜನನ ಮರಣ ಹಿಂಗುವದೆ ?

ಹಾಂಗೆ ಲೋಕದ ಮಾತ ಕೇಳಲಾಗದು.

ಅದು ಹೇಂಗೆಯೆಂದಡೆ :

ಜ್ಯೋತಿಯ ನೆನೆದಡೆ ತಿಮಿರ ಹೋಹುದೇನಯ್ಯಾ ?

ಪಂಚಾಮೃತವ ನೆನೆದಡೆ ಹಸಿವು ತೃಷೆ ಅಡಗುವುದೇನಯ್ಯಾ ?

ಆಗಮಶಾಸ್ತ್ರವ ನೋಡಿದಡೆ, ಕಿವಿಗೊಟ್ಟು ಕೇಳಿ ಹಾಡಿ ಪಾಡಿದಡೆ,

ಅಯ್ಯಾ ನಿಮ್ಮ ಕಂಡಂತಾಯಿತ್ತಯ್ಯಾ ಎಂದುದಾಗಿ,

ಆದಡಾಗಲಿ ಕಂಡು ಆಡುವುದಲ್ಲದೆ,

ಕಾಣದೆ ಆಡುವುದೆಲ್ಲ ಸಂತೆಯಾಗಿ ಹೋಯಿತ್ತಯ್ಯ ಕಾಣಾ,ಜಂಗಮಲಿಂಗಪ್ರಭುವೆ.

 

-ಜಂಗಮಲಿಂಗಪ್ರಭುವೆ