ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ಕಳೆದ ವಾರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಎರಡು ದಿನಗಳ ಹಿಂದೆ ಕುಮಾರಸ್ವಾಮಿ ಅವರು ತಮ್ಮ ಆರೋಗ್ಯ ಸಂಪೂರ್ಣವಾಗಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಬಿ ಎಸ್ ವಿಜಯೇಂದ್ರ ಅವರು ಎಚ್ ಡಿ ಕುಮಾರಸ್ವಾಮಿಯವರ ಆರೋಗ್ಯವನ್ನು ವಿಚಾರಿಸಿದರು.
ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಇಂದು ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಕುಮಾರಸ್ವಾಮಿಗೆ ಮೈಲ್ಡ್ ಸ್ಟ್ರೋಕ್ ಆಗಿತ್ತು ಎಂದು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದರು.
ಅವರು ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ವಿಜಯೇಂದ್ರಗೆ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗಿರಲಿಲ್ಲ. ಒಂದರ್ಥದಲ್ಲಿ ಅದು ಒಳ್ಳೆಯದೇ. ಯಾಕೆಂದರೆ, ಅಸ್ವಸ್ಥತೆಗೊಳಗಾಗಿ ಆಸ್ಪತ್ರೆ ಸೇರುವ ಯಾರೇ ಆಗಲಿ, ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಜನ ಹೋಗಿ ಭೇಟಿಯಾಗುತ್ತಿದ್ದರೆ ರೆಸ್ಟ್ ಗೆ ಭಂಗವುಂಟಾಗುತ್ತದೆ. ರೋಗಿ ಚೇತರಿಸಿಕೊಂಡು ಮನೆಗ ಹೋದ ಮೇಲೆ ಭೇಟಿಯಾಗಿ ಮಾತಾಡಿಸುವುದು ಉತ್ತಮ ಪದ್ಧತಿ.
Disclaimer: This Story is auto-aggregated by a Syndicated Feed and has not been Created or Edited By City Big News Staff.